1. ಅಗ್ರಿಪಿಡಿಯಾ

ಕುಲಾಂತರಿ ಹೈಬ್ರೀಡ್‌ ಸಾಸಿವೆಗೆ ಸ್ವದೇಶಿ ಜಾಗರಣ್‌ ಮಂಚ್‌ ವಿರೋಧ!

Kalmesh T
Kalmesh T
Swadeshi Jagran Manch of RSS opposes Kulanthari hybrid mustard!

ಕುಲಾಂತರಿ ಹೈಬ್ರಿಡ್ ಸಾಸಿವೆ ದೇಶಿಯವಾಗಿ ಅಭಿವೃದ್ಧಿಪಡಿಸಿರುವುದು ಶುದ್ಧ ಸುಳ್ಳು. ಇದು ಆಧಾರರಹಿತ ಮತ್ತು ದಿಕ್ಕುತಪ್ಪಿಸುವ ಯೋಜನೆ ಇಂತಹ ಕುಲಾಂತರಿ ಸಾಸಿವೆ ಬೆಂಬಲಿಸುವ ಮೂಲಕ ಜಿಇಎಸಿ ಬೇಜವಾಬ್ದಾರಿ ತೋರಿದೆ' ಎಂದು ಸ್ವದೇಶಿ ಜಾಗರಣ್‌ ಮಂಚ್‌ ವಿರೋಧ ಮಾಡಿದೆ.

ಇದನ್ನೂ ಓದಿರಿ: ಸರ್ಕಾರ ಸಕ್ಕರೆ ರಫ್ತು ನಿಷೇಧವನ್ನು ಅಕ್ಟೋಬರ್ 2023 ರವರೆಗೆ ವಿಸ್ತರಣೆ ಮಾಡಿದೆ

ದೇಶಿಯವಾಗಿ ಅಭಿವೃದ್ಧಿಪಡಿಸಿರುವ ಕುಲಾಂತರಿ (GM) ಹೈಬ್ರಿಡ್ ಸಾಸಿವೆ ಬೆಳೆಯಲು ಪರಿಸರ ಸಚಿವಾಲಯ ಅನುಮತಿ ನೀಡಿರುವುದಕ್ಕೆ RSS ಅಂಗಸಂಸ್ಥೆ ಸ್ವದೇಶಿ ಜಾಗರಣ್ ಮಂಚ್ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಪರಿಸರ ಸಚಿವಾಲಯದ ಕುಲಾಂತರಿ ನಿಯಂತ್ರಕ ಜೆನೆಟಿಕ್ ಎಂಜಿನಿಯರಿಂಗ್ ಮೌಲ್ಯಮಾಪನ ಸಮಿತಿ ಅನುಮತಿಗೆ ಆಸ್ಪದ ನೀಡಿರುವುದು ಅತ್ಯಂತ ಅಪಾಯಕಾರಿಯಾಗಿದೆ.

ಕುಲಾಂತರಿ ಸಾಸಿವೆಗೆ ಸದ್ಯಕ್ಕಲ್ಲ ಮುಂದೆಯೂ ಕೂಡ ಅನುಮತಿ ನೀಡುವುದಿಲ್ಲವೆಂದು ಖಾತ್ರಿಪಡಿಸುವಂತೆ ಕೇಂದ್ರ ಸರ್ಕಾರವನ್ನು ಎಸ್‌ಜಿಎಂ ಒತ್ತಾಯಿಸಿದೆ.

Milk Price: ಹಾಲು ಉತ್ಪಾದಕರಿಗೆ ಸಿಹಿಸುದ್ದಿ; ನವೆಂಬರ್‌ 1ರಿಂದ ಲೀಟರ್‌ಗೆ 2ರೂ ಹೆಚ್ಚಳ!

ಕೇಂದ್ರ ಪರಿಸರ ಸಚಿವ ಭೂಪೇಂದರ್‌ ಯಾದವ್ ಅವರಿಗೆ ಬರೆದಿರುವ ಪತ್ರದಲ್ಲಿ ಕುಲಾಂತರಿ ಹೈಬ್ರಿಡ್ ಸಾಸಿವೆ ದೇಶಿಯವಾಗಿ ಅಭಿವೃದ್ಧಿಪಡಿಸಿರುವುದು ಶುದ್ಧ ಸುಳ್ಳು.

ಇದು ಆಧಾರರಹಿತ ಮತ್ತು ದಿಕ್ಕುತಪ್ಪಿಸುವ ಯೋಜನೆ ಇಂತಹ ಕುಲಾಂತರಿ ಸಾಸಿವೆ ಬೆಂಬಲಿಸುವ ಮೂಲಕ ಜಿಇಎಸಿ ಬೇಜವಾಬ್ದಾರಿ ತೋರಿದೆ' ಎಂದು ಎಸ್‌ಟಿಎಂ ಆರೋಪಿಸಿದೆ.

ಸಾರ್ವಜನಿಕ ವಲಯಕ್ಕೆ ಹಿಂಬಾಗಿಲಿನಿಂದ ಪ್ರವೇಶಿಸಲು ಕುಲಾಂತರಿ ಸಾಸಿವೆಗೆ ಅನುಮತಿಸಿರುವುದು ಸರಿಯಲ್ಲ ಈ ಹಿಂದೆ ಕುಲಾಂತರಿ ಸಾಸಿವೆ ಬೆಳೆ ಪರವಾಗಿ ಜಿಇಎಸಿ ಶಿಫಾರಸು ಮಾಡಿದಾಗ ಕಳವಳ ವ್ಯಕ್ತಪಡಿಸಿ, ನಿರ್ಧಾರ ಮರುಪರಿಶೀಲನೆಗೂ ಒತ್ತಾಯಿಸಲಾಗಿತ್ತು.

10ನೇ ತರಗತಿ ಪಾಸಾಗಿದ್ದರೇ ಸಾಕು KMF ನಲ್ಲಿವೆ ಉದ್ಯೋಗಾವಕಾಶ; ರೂ.97100 ಸಂಬಳ!

ಆದ್ದರಿಂದ ಆಗ ಅನುಮತಿ ನೀಡಿರಲಿಲ್ಲ. ಆದರೆ, ಈಗ ಕುಲಾಂತರಿ ಬೆಳೆ ಸಂಶೋಧಕರ ಜತೆಗೆ ಜಿಇಎಸಿ ಕೈಜೋಡಿಸಿದೆ. ಆಡಳಿತದಲ್ಲಿ ರಾಜಿಯಾಗಿದೆ.

ಕುಲಾಂತರಿ ಸಾಸಿವೆ ವಿಚಾರದಲ್ಲೂ ಇಂತಹದೇ ಬೆಳವಣಿಗೆ ಆಗಿದೆ' ಎಂದು ಎಸ್‌ಟಿಎಂ ಸಹ ಸಂಚಾಲಕ ಅಶ್ವಾನಿ ಮಹಾಜನ್ ಅವರು ಪತ್ರದಲ್ಲಿ ಆರೋಪಿಸಿದ್ದಾರೆ.

ಕುಲಾಂತರಿ ಸಾಸಿವೆ ಬೆಳೆಗೆ ಜಿಇಎಸಿಯಿಂದ ಅನುಮತಿ ಪಡೆದಿರುವ ತಳಿ ವಿಜ್ಞಾನಿ ದೀಪಕ್ ಪೆಂಟಲ್ ಅವರ ಹೆಸರನ್ನು ಉಲ್ಲೇಖಿಸಿರುವ ಮಹಾಜನ್, 'ಪೆಂಟಲ್ ಮತ್ತು ಅವರ ತಂಡ ಪ್ರಚುರಪಡಿಸುತ್ತಿರುವ ಡಿಎಂಎಚ್-11 ರೀತಿಯದ್ದೇ ಆದ ಕುಲಾಂತರಿ ಹೈಬ್ರಿಡ್ ಸಾಸಿವೆಗೆ ವಾಣಿಜ್ಯ ಅನುಮತಿಗಾಗಿ ಪ್ರೊಆಗೊ ಸೀಡ್ಸ್ ಕಂಪನಿ (ಬೇಯರ್ ಸಬ್ಸಿಡಿ ಪಡೆಯುವ ಕಂಪನಿ) 2002ರಲ್ಲಿ ಅರ್ಜಿ ಸಲ್ಲಿಸಿತ್ತು.

'Water Heroes: Share Your Stories’ ಸ್ಪರ್ಧೆಗೆ ಅರ್ಜಿ ಆಹ್ವಾನ; ನೀವೂ ನಿಮ್ಮ ಕಥೆ ಹಂಚಿಕೊಂಡು ರೂ.10,000 ಗೆಲ್ಲಬಹುದು!

ಕುಲಾಂತರಿ ಹೈಬ್ರಿಡ್ ಸಾಸಿವೆ ಕ್ಷೇತ್ರ ಪ್ರಯೋಗದಲ್ಲಿ ಹೆಚ್ಚಿನ ಇಳುವರಿ ನೀಡದಿದ್ದಾಗ ಕಂಪನಿಯ ಪರವಾನಗಿ ಅರ್ಜಿಯನ್ನು ಭಾರತೀಯ ಕೃಷಿ ಸಂಶೋಧನಾ ಮಂಡಳಿಯು (ICAR) ತಿರಸ್ಕರಿಸಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

'ಕುಲಾಂತರಿ ಹೈಬ್ರಿಡ್ ಸಾಸಿವೆಗೆ (ಔಷಧೀಯ ಮತ್ತು ಜೈವಿಕ ತಂತ್ರಜ್ಞಾನದ ಬಹುರಾಷ್ಟ್ರೀಯ ಕಂಪನಿ) ಹಕ್ಕುಸ್ವಾಮ್ಯ ಹೊಂದಿದೆ. ಇದಕ್ಕೆ ರಾಯಧನ ಕೂಡ ಪಾವತಿಸಬೇಕು.

ಆದರೆ, ಇದೆಲ್ಲವನ್ನೂ ಉದ್ದೇಶಪೂರ್ವಕವಾಗಿ ದೇಶದ ಜನತೆಯಿಂದ ಮುಚ್ಚಿಡಲಾಗಿದೆ' ಎಂದು ಮಹಾಜನ್ ಗಂಭೀರ ಆರೋಪ ಮಾಡಿದ್ದಾರೆ.

Published On: 30 October 2022, 10:53 AM English Summary: Swadeshi Jagran Manch of RSS opposes Kulanthari hybrid mustard!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.