1. ಸುದ್ದಿಗಳು

ವಿಶ್ವವಿಖ್ಯಾತ ಬಸವನಗುಡಿ ಕಡಲೆ ಪರಿಷೆಗೆ ಕ್ಷಣಗಣನೆ!

Hitesh
Hitesh
Countdown to the world famous Basavanagudi kadalai parishe!

ವಿಶ್ವವಿಖ್ಯಾತ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಬಸವನಗುಡಿ ಅಕ್ಷರಶಃ ವಧುವಣಗಿತ್ತಿಯಂತೆ ಶೃಂಗಾರಗೊಂಡಿದೆ!

ಇದನ್ನೂ ಓದಿರಿ: ಬೆಂಗಳೂರು ಬಸವನಗುಡಿ ಕಡಲೆ ಪರಿಷೆ: ಈ ಬಾರಿ ತೆಪ್ಪೋತ್ಸವದ ಮೆರುಗು! 

ಕಡಲೆ ಕಾಯಿ ಪರಿಷೆಗೆ ಬಸವನಗುಡಿ ಕಳೆಗಟ್ಟಿದೆ. ಭಾನುವಾರ ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ.

ಕಡಲೆ ಪರಿಷೆಯು ಸಾಮಾನ್ಯವಾಗಿ ಕಾರ್ತೀಕ ಮಾಸದ ಕಡೆಯ ಸೋಮವಾರದಂದು ಬಸವನಗುಡಿಯಲ್ಲಿ   ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯುತ್ತದೆ.

ಆದರೆ, ಇದೀಗ ಒಂದುದಿನ ಮುನ್ನ ಅಂದರೆ, ಭಾನುವಾರವೇ ಕಡಲೆ ಪರಿಷೆ ಪ್ರಾರಂಭವಾಗುತ್ತಿದೆ.  

ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 7ನೇ ವೇತನ ಆಯೋಗ ರಚನೆಗೆ ಸಿಎಂ ಅನುಮೋದನೆ: ಆರು ತಿಂಗಳಲ್ಲಿ ಶಿಫಾರಸ್ಸು ಸಾಧ್ಯತೆ!

ಇನ್ನು ಭಾನುವಾರ ಬೆಳಿಗ್ಗೆಯೇ ಬುಲ್ ಟೆಂಪಲ್ ರಸ್ತೆಯಲ್ಲಿ ಜನಸಂದಣೆ ಕಂಡುಬಂತು. ವ್ಯಾಪಾರಿಗಳು, ರೈತರು ಕಡಲೆಕಾಯಿ ಮಾರಾಟಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.  

ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಬಿಬಿಎಂಪಿ (BBMP) ಅಧಿಕಾರಿಗಳು ಶನಿವಾರ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದರು.

ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತರು ಹಾಗೂ ದಕ್ಷಿಣ ವಲಯ ಆಯುಕ್ತರೂ ಆಗಿರುವ ಜಯರಾಮ ರಾಯಪುರ ಅವರು ದೊಡ್ಡ ಗಣಪತಿ ಮತ್ತು

ದೊಡ್ಡ ಬಸವಣ್ಣ ದೇವಸ್ಥಾನಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಸಿದ್ಧತೆಗಳನ್ನು ಪರಿಶೀಲಿಸಿದರು.

ಬೆಂಕಿ ರೋಗ ನಿರೋಧಕ ಶಕ್ತಿ ಇರುವ ಕೆಂಪಕ್ಕಿ ಭತ್ತದ ತಳಿ ಅಭಿವೃದ್ಧಿ!

ಈ ವೇಳೆ ಮಾತನಾಡಿದ ಅವರು, ಪರಿಷೆ ಉದ್ಘಾಟನೆ ವೇಳೆ ಪೆಂಡಾಲ್ ಮತ್ತು ಆಸನಗಳ ವ್ಯವಸ್ಥೆ, ಗಣ್ಯರು ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಅಲ್ಲದೇ ಎಪಿಎಸ್‌ಕಾಲೇಜ್ ಆಟದ ಮೈದಾನ ಮತ್ತು ಕೊಹಿನೂರು ಆಟದ ಮೈದಾನದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಭಕ್ತಾದಿಗಳಿಗೆ ದೇವರ ದರ್ಶನ ಪಡೆಯಲು ಹಲವು ಕಡೆ ಎಲ್‌ಇಡಿ ಸ್ಕ್ರೀನ್‌ಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.   

ರೈತರ ಮಕ್ಕಳಿಗೆ ಸಿಹಿಸುದ್ದಿ: ಶಿಕ್ಷಣದಲ್ಲಿ ಶೇ.10% ಮೀಸಲಾತಿ; 430 ಸೀಟು ಲಭ್ಯ- ಬಿ.ಸಿ ಪಾಟೀಲ್‌!

Countdown to the world famous Basavanagudi kadalai parishe!

ಸೋಮವಾರ ಸಂಜೆ ತೆಪ್ಪೋತ್ಸವ

ಭಾನುವಾರ ಸಂಜೆ ಕಡಲೆಕಾಯಿ ಪರಿಷೆಗೆ ಚಾಲನೆ ನೀಡಲಾಗುತ್ತದೆ. ಸೋಮವಾರ ಸಂಜೆ ಹಲವು ವರ್ಷಗಳ ನಂತರ  ಕೆಂಪಾಂಬುದಿ ಕೆರೆಯಲ್ಲಿ ತೆಪ್ಪೋತ್ಸವ ನಡೆಯಲಿದೆ.

ಇದೊಂದು ಸಾಂಪ್ರದಾಯಿಕ ಕಾರ್ಯಕ್ರಮವಾಗಿದ್ದು, ಪರಿಷೆಗೆ ಕಳೆ ನೀಡಲಿದೆ. ಹಲವು ವರ್ಷಗಳ ನಂತರದಲ್ಲಿ ಈ ತೆಪ್ಪೋತ್ಸವ ನಡೆಯಲಿದ್ದು, ಸಾವಿರಾರು ಜನ ಈ ಸಂದರ್ಭದಲ್ಲಿ ಇಲ್ಲಿ ಸೇರುವ ಸಾಧ್ಯತೆ ಇದೆ.

ಟೊಮೆಟೊ ಬೆಳೆಗೆ ಅಂಗಮಾರಿ ರೋಗ: ನಿರ್ವಹಣೆ ಮತ್ತು ತಡೆಗಟ್ಟುವಿಕೆ …

Countdown to the world famous Basavanagudi kadalai parishe!

ಇನ್ನು ಕಡಲೆಕಾಯಿ ಪರಿಷೆ ಸಂದರ್ಭದಲ್ಲಿ ವ್ಯಾಪಾರಸ್ಥರಿಗೆ ಅಂದಾಜು 2 ಸಾವಿರ ತಾತ್ಕಾಲಿಕ ಅಂಗಡಿಗಳನ್ನು ನಡೆಸಲು ಫುಟ್‌ಪಾತ್‌ಬದಿಯಲ್ಲಿ ಅನುಕೂಲ ಕಲ್ಪಿಸಲಾಗಿದೆ.

ಸುಮಾರು 1 ಕಿ.ಮೀ ಸರಹದ್ದು ವ್ಯಾಪ್ತಿಯಲ್ಲಿ ಅಲಂಕಾರಿಕ ವಿದ್ಯುತ್‌ದೀಪಗಳನ್ನು ಅಳವಡಿಸಲಾಗಿದೆ. ಮುನ್ನೆಚ್ಚೆರಿಕೆ ಸಲುವಾಗಿ ಅಗ್ನಿಶಾಮಕ ವಾಹನ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಬೆಸ್ಕಾಂನಿಂದ ವಿದ್ಯುತ್‌ಸರಬರಾಜು, ಕುಡಿಯುವ ನೀರಿನ ವ್ಯವಸ್ಥೆ ಸೇರಿ ಅಗತ್ಯ ಮೂಲಸೌಕರ್ಯ ವ್ಯವಸ್ಥೆಯನ್ನೂ ಮಾಡಲಾಗಿದೆ.

ಬ್ಯೂಗಲ್ ರಾಕ್‌ಉದ್ಯಾನವನ ಮತ್ತು ನರಸಿಂಹಸ್ವಾಮಿ ಉದ್ಯಾನವನದಲ್ಲಿ ನ.20 ರಿಂದ 22ರವರೆಗೆ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎನ್ನಲಾಗಿದೆ.

Countdown to the world famous Basavanagudi kadalai parishe!

ಪರಿಷೆ ಆರಂಭಕ್ಕೂ ನಾಲ್ಕು ದಿನ ಮೊದಲು ಮತ್ತು ನಂತರ ನಾಲ್ಕು ದಿನ ಮಳಿಗೆಗಳು ತೆರೆದಿರುವುದಲ್ಲದೆ ಖರೀದಿಯೂ ನಡೆಯುತ್ತದೆ. ಹೀಗಾಗಿ, ಒಟ್ಟಾರೆ ಕಡಲೆಕಾಯಿ ಪರಿಷೆಯಲ್ಲಿ ಸುಮಾರು 6 ಲಕ್ಷ ಮಂದಿ ಪಾಲ್ಗೊಳ್ಳುವ ಇದೆ.

ಪರಿಷೆ ಮತ್ತು ತೆಪ್ಪೋತ್ಸವಕ್ಕೆ ಮುಜರಾಯಿ ಇಲಾಖೆ ಮತ್ತು ಬಿಬಿಎಂಪಿ ತಮ್ಮ ವ್ಯಾಪ್ತಿಯ ಕಾರ್ಯಕ್ರಮಗಳಿಗೆ ಆರ್ಥಿಕ ನೆರವು ನೀಡಲಿವೆ.

ಪ್ರಸಕ್ತ ಸಾಲಿನಲ್ಲಿ ರಾಮನಗರ, ಕನಕಪುರ, ಮಾಗಡಿ, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಕಡ್ಲೆಕಾಯಿ ಬೆಳೆಯುವ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದ್ದು, ಕಡಲೆ ಬೆಳೆಯು ಪ್ರಮಾಣವೂ ಹೆಚ್ಚಾಗಿದ್ದು, ವಿಭಿನ್ನ ಮಾದರಿಯ ತಳಿಗಳು ಬರುವ ಸಾಧ್ಯತೆ ಇದೆ.   

ಕಡಲೆ ಪರಿಷೆಯ ಹಿನ್ನೆಲೆ ಏನು ಗೊತ್ತೆ ?

ದಶಕಗಳ ಹಿಂದೆ ಬೆಂಗಳೂರು ಸಹ ಇಷ್ಟು ಪ್ರಮಾಣದಲ್ಲಿ ಬೃಹತ್‌ ಆಗಿ ಬೆಳೆದಿರಲಿಲ್ಲ. ಸಣ್ಣ ಊರಾಗಿತ್ತು. ಈಗ ಬೆಳೆದು ದೊಡ್ಡ ಊರಾಗಿ ಬದಲಾಗಿದೆ.   

ಬೆಂಗಳೂರು ಗಾತ್ರದಲ್ಲಿ ಬೆಳೆದು ಮಹಾ ನಗರವಾಗುವ ಮೊದಲು, ಬಸವನಗುಡಿಯ ಪಕ್ಕದ ಹಳ್ಳಿಗಳಲ್ಲಿ ಪ್ರತಿ ವರ್ಷ ನೆಲಗಡಲೆ (ಶೇಂಗಾ) ಬೆಳೆಯುತ್ತಿದ್ದರು.

ಈ ಬೆಳೆ ಕಟಾವಿಗೆ ಬರುವ ಸಂದರ್ಭದಲ್ಲಿ ಕಟಾವಿಗೆ ಸಿದ್ಧವಾದ ನೆಲಗಡಲೆಯನ್ನೆಲ್ಲ ಗದ್ದೆಗೆ ದಾಳಿ ಇಡುತ್ತಿದ್ದ ಬಸವವೊಂದು ನಾಶಪಡಿಸುತ್ತಿತ್ತು.

ರೈತರು ತಮ್ಮ ಬೆಳೆಯನ್ನು ರಕ್ಷಿಸಿಕೊಳ್ಳಲು ತಮ್ಮ ಮೊದಲ ಬೆಳೆಯನ್ನು ಬಸವನಿಗೆ ಅರ್ಪಿಸಿ ಬಸವ (ನಂದಿ)ನನ್ನು ಪ್ರಾರ್ಥಿಸಲು ಆರಂಭಿಸಿದರು.

ಬಸವನಗುಡಿ ಪ್ರದೇಶದಲ್ಲಿ ನಂದಿಯ ವಿಗ್ರಹವೊಂದು ದೊರಕಿತು ಮತ್ತು ಈ ಸ್ಥಳದಲ್ಲಿ ಕೆಂಪೇಗೌಡರು 16 ನೇಶತಮಾನದಲ್ಲಿ ನಂದಿಯ ಸುತ್ತಲೂ ದೇವಾಲಯವನ್ನು ನಿರ್ಮಿಸಿದರು.

ಇದನ್ನು ಬಸವನ ಗುಡಿ ಅಥವಾ ಬಿಗ್‌ಬುಲ್ ಟೆಂಪಲ್ ಎಂದು ಕರೆಯಲಾಗುತ್ತದೆ. ಕಡಲೆ ಕಾಯಿ ಪರಿಷೆ ಈ ದೇವಾಲಯದ ಸುತ್ತ ಕೇಂದ್ರೀಕೃತವಾಗಿದೆ.

ಬಸವ ರೈತರು ಅರ್ಪಿಸಿದ ನೆಲಗಡಲೆಯನ್ನು ಸ್ವೀಕರಿಸಿ ಆಶೀರ್ವದಿಸುತ್ತಾನೆ ಎಂಬದು ಪ್ರತಿಯಾಗಿದ್ದು, ಹಲವು ವರ್ಷಗಳಿಂದ ಇದೇ ಸಂಪ್ರದಾಯ ಮುಂದುವರಿದುಕೊಂಡು ಬಂದಿದೆ.

ಸಂಭ್ರಮ, ಹಬ್ಬದ ವಾತಾವರಣ

ಬೆಂಗಳೂರು ಈಗ ಬೃಹತ್‌ ನಗರವಾಗಿ ಬದಲಾಗಿದೆ. ಮೊದಲಿನಂತೆ ಹಳ್ಳಿಯ ವಾತಾವರಣ ತೆರೆದುಕೊಳ್ಳುವುದು ಕಡಿಮೆ.

ಆದರೆ, ಕಡಲೆ ಪರಿಷೆಯ ಸಮಯದಲ್ಲಿ ಗ್ರಾಹಕರು ನೆಲಗಡಲೆಗಳನ್ನು ರೈತರಿಂದ ನೇರವಾಗಿ ಮಾರುಕಟ್ಟೆ ದರಕ್ಕಿಂತ ಅಗ್ಗವಾಗಿ ಖರೀದಿಸುತ್ತಾರೆ.

ಕಡಲೆಕಾಯಿ ಪರಿಷೆಯ ಸಂದರ್ಭದಲ್ಲಿ ಬಸವನ ಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ನಡೆಯುತ್ತದೆ.

ಅಲಂಕೃತ ಬೀದಿಗಳಲ್ಲಿ ಸಾಕಷ್ಟು ಶಾಪಿಂಗ್ ಆಯ್ಕೆಗಳು, ಆಹಾರ ಮಳಿಗೆಗಳು, ಆಟಗಳು ಮತ್ತು ಮಕ್ಕಳಿಗೆ ಆಟಿಕೆಗಳು ಇರುತ್ತವೆ.

ಬಸವನಗುಡಿ ಮತ್ತು ಸುತ್ತಮುತ್ತಲಿನ ಜನರು ಕಡಲೆಕಾಯಿ ಪರಿಷೆಯನ್ನು ಕಾತರದಿಂದ ಎದುರು ನೋಡುತ್ತಾರೆ ಮತ್ತು ಸಂಭ್ರಮಾಚರಣೆಗಳಲ್ಲಿ ಪಾಲ್ಗೊಳ್ಳುತ್ತಾರೆ.

ಈಗಲೂ ಜನ ನಂಬಿಕೆಯಿಂದ ಬಸವನಿಗೆ ಕೈ ಮುಗಿಯುತ್ತಾರೆ. ಇದು ಸದ್ಯ ಯುವಕರಿಗೆ ಮತ್ತು ಹೊಸ ಪೀಳಿಗೆಗೆ ಹಳೆಯ ಸಂಪ್ರದಾಯವನ್ನು ತಿಳಿಸುವ ಉತ್ಸವವಾಗಿಯೂ ಉಳಿದುಕೊಂಡಿದೆ.

Published On: 20 November 2022, 01:58 PM English Summary: Countdown to the world famous Basavanagudi kadalai parishe!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.