1. ಸುದ್ದಿಗಳು

ಯುವಕರಿಗೆ ಉಚಿತವಾಗಿ ದ್ವಿಚಕ್ರ ವಾಹನ ರಿಪೇರಿ ತರಬೇತಿ

ಯುವಕರು ಸ್ವ-ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲತೆ ಸಾಧಿಸಲು ಎಂಬ ಉದ್ದೇಶದಿಂದ ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ ದ್ವಿಚಕ್ರ ವಾಹನ ರಿಪೇರಿ ತರಬೇತಿಯನ್ನು ಆಯೋಜಿಸಲಾಗಿದೆ. ಆಸಕ್ತಿಯುಳ್ಳವರು ಕನಿಷ್ಠ 7 ನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದಿರಬೇಕು. 18 ರಿಂದ 45 ವಯೋಮಾನದವರಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯವಿರುತ್ತದೆ.

ತರಬೇತಿ ನವೆಂಬರ್‌ 2 ರಿಂದ ಪ್ರಾರಂಭವಾಗುತ್ತದೆ. ಸಂಪರ್ಕಿಸಬಹುದಾದ ವಿಳಾಸ: ಕೆನರಾ ಬ್ಯಾಂಕ್ ಎ.ಡಿ.ಪೈ ಅಭಿವೃದ್ಧಿ ಸಂಸ್ಥೆ ಬೆಂಗಳೂರು –ಮೈಸೂರು ಹೆದ್ದಾರಿ ವಾಜರಹಳ್ಳಿ, ಬಿಡದಿ ಹೋಬಳಿ, ರಾಮನಗರ. ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಯೋಜಕರು: 9591752123, ನಿರ್ದೇಶಕರು :9481340614 ಗೆ ಕರೆ ಮಾಡಬಹುದು.

Published On: 25 October 2020, 12:20 PM English Summary: free training for vehicle repair

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.