1. ಸುದ್ದಿಗಳು

ಸಿರಿಧಾನ್ಯ ಬೆಳೆಗಾರರಿಗೆ ಸರ್ಕಾರದಿಂದ ಸಿಗುತ್ತಿದೆ 10 ಸಾವಿರ ರೂ..ಅರ್ಜಿ ಸಲ್ಲಿಕೆ ಹೇಗೆ..?

Maltesh
Maltesh
ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯುವ ಬೆಳೆಗಾರರಿಗೆ ಉತ್ತೇಜನ ನೀಡಲು ರೈತಸಿರಿ ಎಂಬ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದ್ದು ಹಾಗೂ ಈ ಯೋಜನೆಯ ಅನುಷ್ಠಾನಕ್ಕಾಗಿ 1,000 ಲಕ್ಷ ರೂಪಾಯಿಗಳ ಅನುದಾನವನ್ನು ಘೋಷಿಸಿದೆ.

ರಾಜ್ಯದಲ್ಲಿ ಸಿರಿಧಾನ್ಯ ಬೆಳೆಯುವ ರೈತರಿಗೆ ಸರ್ಕಾರ ಇದನ್ನು ನೇರ ವರ್ಗಾವಣೆ ಮೂಲಕ ರೈತರ ಅಕೌಂಟ್‌ಗೆ 10 ಸಾವಿರ ರೂಪಾಯಿ ಪಾವತಿಸಲಾಗುತ್ತದೆ. ಸಿರಿಧಾನ್ಯ ಬೆಳೆಗಳ ವ್ಯಾಪ್ತಿ ಹೆಚ್ಚಿಸಲು ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ ಅನುದಾನವನ್ನು ನೀಡಲಾಗುತ್ತಿದೆ.

ಈ ಯೋಜನೆಯನ್ನು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ ಯೋಜನೆಗಳೊಂದಿಗೆ ಸಂಯೋಜಿಸಲಾಗಿದೆ. ಸಿರಿಧಾನ್ಯಗಳು ಪ್ರಮುಖವಾಗಿ ಮಳೆಯಾಶ್ರಿತ ಬೆಳೆಗಳಾಗಿದ್ದು ಮುಂಗಾರು ಹಂಗಾಮನಲ್ಲಿ ಬೆಳೆಯಲಾಗುತ್ತದೆ.

ಈ ಯೋಜನೆಯ ಉದ್ದೇಶಗಳು ಏನು..?

ಸಿರಿಧಾನ್ಯ ಬಿತ್ತನೆಯನ್ನು ಹೆಚ್ಚಿಸುವುದು ಮತ್ತು ಉತ್ಪಾದನೆಯ ಹೆಚ್ಚಳ

ಮಹತ್ವದ ಸುದ್ದಿ: ರೇಷನ್‌ ಬದಲು ಹಣ ನೀಡಲು ಚಿಂತನೆ..ಶೀಘ್ರದಲ್ಲೇ ಜಾರಿ ಸಾಧ್ಯತೆ..!

ಜೋರಾಗಿದೆ Hydroponic Farmingಗೆ ಬೇಡಿಕೆ..ಇಲ್ಲಿವೆ ಟಾಪ್‌ 5 ತರಕಾರಿಗಳು

ಸಿರಿಧಾನ್ಯಗಳು ಸುಸ್ಥಿರ ಕೃಷಿ ಹಾಗೂ ಪರಿಸರಕ್ಕೆ ಪೂರಕವಾಗಿರುವುದರಿಂದ ಈ ಧಾನ್ಯಗಳನ್ನು ಬೆಳೆಯಲು ಪ್ರೋತ್ಸಾಹ

ಕಡಿಮೆ ಫಲಪ್ರದವಾದ ಭೂಮಿಯ ಸದ್ಬಳಕೆಗಾಗಿ ಪೂರಕವಾದ ಸುಧಾರಿತ ತಾಂತ್ರಿಕತೆಗಳನ್ನು ಸೂಕ್ತವಾಗಿ ಅಳವಡಿಸಿ ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸುವುದು.

ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿ

2 ಕಂತುಗಳಲ್ಲಿ ನಗದು ವರ್ಗಾವಣೆ

ಈ ಕಂಪನಿಯಲ್ಲಿ ತೂಕ ಇಳಿಸಿಕೊಂಡ್ರೆ ಅರ್ಧ ತಿಂಗಳ ಸಂಬಳ ಬೋನಸ್‌..!

WPI Inflation: ಗರಿಷ್ಠ ಮಟ್ಟಕ್ಕೆ ಸಗಟು ಹಣದುಬ್ಬರ..ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ..

ಸೀದಾ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುವುದು.

ಹಾರಕ, ನವಣೆ, ಹಾರಕ, ಸಾಮೆ ಮತ್ತು ಬರಗು ಸಿರಿಧಾನ್ಯಗಳಿಗೆ ಮಾತ್ರ ಆದ್ಯತೆ

ಎಲೆಕ್ಟ್ರಿಕ್ ವಾಹನ ಖರೀದಿಗೆ ಈ ಬ್ಯಾಂಕ್ ನೀಡಲಿದೆ ಉತ್ತಮವಾದ ಸಬ್ಸಿಡಿ!

“ರೈತರೊಂದಿಗೆ ಚೆಲ್ಲಾಟವಾಡಿದರೆ ಅಧಿಕಾರದಿಂದ ಕೆಳಗಿಳಿಸುತ್ತೇವೆ”- ಪ್ರಧಾನಿ ಮೋದಿಗೆ ಕೆಸಿಆರ್ ಎಚ್ಚರಿಕೆ!

ಮೊದಲ ಕಂತಿನ 6000 ರೂಪಾಯಿಯನ್ನು ಬಿತ್ತನೆ ಮಾಡಿದ 30 ದಿನಗಳ ನಂತರ ಜಿಪಿಎಸ್‌ ಆಧಾರಿತ ಫೋಟೋ ಪರಿಶೀಲನೆ ಬಳಿಕ ನೀಡಲಾಗುತ್ತದೆ.

₹4,000ವನ್ನು ನಂತರದಲ್ಲಿ ಜಮೆ ಮಾಡಲಾಗುವುದು.

ಗರಿಷ್ಠ 2 ಹೆಕ್ಟೇರ್‌ಗೆ ಮಾತ್ರ ಸೀಮಿತವಾಗುವಂತೆ ಪ್ರೋತ್ಸಾಹಧನ.

ಫಲಾನುಭವಿಗಳ ಅರ್ಹತೆ:

ಫಲಾನುಭವಿಯು ಮೊದಲಿಗೆ ರೈತರಾಗಿರಬೇಕು. ಅವರ ಹೆಸರರಿನಲ್ಲಿಯೇ ಜಮೀನನ್ನು ಹೊಂದಿರಬೇಕು. ಜಂಟಿ ಖಾತೆ ಇದ್ದಿದ್ದಲ್ಲಿ, ಇತರೆ ಖಾತೆದಾರರ ಒಪ್ಪಿಗೆಯ ಪ್ರಮಾಣ ಪತ್ರ ಪಡೆದಿರಬೇಕು.

ಮಹಿಳೆಯ ಹೆಸರಲ್ಲಿ ಖಾತೆ ಹೊಂದಿ, ಕುಟುಂಬದ ಇತರೆ ಪುರುಷ ಸದಸ್ಯರ ಹೆಸರಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ಮಾನ್ಯ ಮಾಡಬಾರದು, ಅಂತವುಗಳನ್ನು ತಿರಸ್ಕರಿಸಬೇಕು.

ಈ ತಪ್ಪುಗಳನ್ನ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಕ್ಲೋಸ್ ಆಗೋದು ಫಿಕ್ಸ್..!

ಜೋರಾಗಿದೆ Hydroponic Farmingಗೆ ಬೇಡಿಕೆ..ಇಲ್ಲಿವೆ ಟಾಪ್‌ 5 ತರಕಾರಿಗಳು

ಈ ತಪ್ಪುಗಳನ್ನ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಕ್ಲೋಸ್ ಆಗೋದು ಫಿಕ್ಸ್..!

ಜೋರಾಗಿದೆ Hydroponic Farmingಗೆ ಬೇಡಿಕೆ..ಇಲ್ಲಿವೆ ಟಾಪ್‌ 5 ತರಕಾರಿಗಳು

ಈ ಯೋಜನೆಯಡಿ, ಮುಖ್ಯವಾಗಿ ರಾಜ್ಯದ 17 ಜಿಲ್ಲೆಗಳಲ್ಲಿಊದಲು, ನವಣೆ, ಹಾರಕ, ಕೊರಲೆ, ಸಾಮೆ, ಮತ್ತುಬರಗು ಸಿರಿಧಾನ್ಯಗಳಿಗೆ ಒತ್ತು ನೀಡಲಾಗಿದೆ. ಫಲಾನುಭವಿ ರೈತರು ಮೇಲ್ಕಾಣಿಸಿದ ಸಿರಿಧಾನ್ಯಗಳನ್ನೆ ಪ್ರಮುಖ ಬೆಳೆಯಾಗಿ ಬೆಳೆದಿರಬೇಕು

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳ ಪಟ್ಟಿ

ವಸತಿ ಪ್ರಮಾಣಪತ್ರ

ಆಧಾರ್ ಕಾರ್ಡ್

ಆದಾಯ ಪ್ರಮಾಣಪತ್ರ

ಈ ಕಂಪನಿಯಲ್ಲಿ ತೂಕ ಇಳಿಸಿಕೊಂಡ್ರೆ ಅರ್ಧ ತಿಂಗಳ ಸಂಬಳ ಬೋನಸ್‌..!

WPI Inflation: ಗರಿಷ್ಠ ಮಟ್ಟಕ್ಕೆ ಸಗಟು ಹಣದುಬ್ಬರ..ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ..

ಬ್ಯಾಂಕ್ ಖಾತೆ ಪಾಸ್ ಬುಕ್‌

ವಿಳಾಸದ ಕುರಿತಂತೆ ಪುರಾವೆ

ಭೂ ದಾಖಲೆಗಳು

ಅರ್ಜಿ ಸಲ್ಲಿಕೆ ಹೇಗೆ..?
ಸಿರಿಧಾನ್ಯ ಬೆಳೆಗಾರರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಈ ಯೋಜನೆಯನ್ನು ಆರಂಭಿಸಿದ್ದು, ಯೋಜನೆಯ ಅನ್ವಯ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಯಾವುದೇ ಮಾಹಿತಿಯನ್ನು ಘೋಷಿಸಿಲ್ಲ. ಸರ್ಕಾರಿ ಅಧಿಕಾರಿಗಳ ಪ್ರಕಾರ, ಅರ್ಹ ಪಲಾನುಭವಿಗಳು ರಾಜ್ಯ ಪೋರ್ಟಲ್‌ನಲ್ಲಿ ರೈತ ಸಿರಿ ಯೋಜನೆಗೆ ಅರ್ಜಿ ಸಲ್ಲಿಸಬೇಕು. ಯೋಜನೆಯ ಬಗ್ಗೆ ಹೆಚ್ಚಿನ ವಿವರಗಳನ್ನು https://raitamitra.karnataka.gov.in/info-2/Raita+Siri/en ನಲ್ಲಿ ಪರಿಶೀಲಿಸಬಹುದು

WPI Inflation: ಗರಿಷ್ಠ ಮಟ್ಟಕ್ಕೆ ಸಗಟು ಹಣದುಬ್ಬರ..ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ..

ಈ ತಪ್ಪುಗಳನ್ನ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಕ್ಲೋಸ್ ಆಗೋದು ಫಿಕ್ಸ್..!

Published On: 17 June 2022, 01:52 PM English Summary: Government Giving To Farmers 10000per Hector

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.