1. ಸುದ್ದಿಗಳು

Heavy rains ರಾಜ್ಯದ ಈ ಭಾಗದಲ್ಲಿ ಧಾರಾಕಾರ ಮಳೆ ಹವಾಮಾನ ಇಲಾಖೆ ಮುನ್ಸೂಚನೆ

Hitesh
Hitesh
Heavy rains are predicted by the Indian Meteorological Department in this part of the state

ರಾಜ್ಯದ ಹಲವು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಅಲ್ಲಲ್ಲಿ ಮಳೆ ಅವಘಡಗಳು ಸಂಭವಿಸಿವೆ.

ಕಳೆದ 24 ಗಂಟೆಯ ಅವಧಿಯಲ್ಲಿ ನೈರುತ್ಯ ಮುಂಗಾರು ರಾಜ್ಯದಾದ್ಯಂತ ಚುರುಕಾಗಿತ್ತು.

ಹೀಗಾಗಿ, ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗಿರುವುದು (Karnataka Weather Report) ವರದಿ ಆಗಿದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಕರಾವಳಿಯ ಉತ್ತರ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ

ಕೆಲವು ಕಡೆಗಳಲ್ಲಿ ಭಾರೀಯಿಂದ ಭಾರೀ ಮಳೆ (Heavy Rain) ಯಾಗುವ ಸಾಧ್ಯತೆ ಇದ್ದು,

ಒಂದೆರಡು ಕಡೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ (Karnataka Weather)ಸಾಧ್ಯತೆ ಇದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ

ಹಾಗೂ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀಯಿಂದ ಭಾರೀ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಬಳ್ಳಾರಿ,

ಹಾಸನ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀಯಿಂದ ಭಾರೀ ಮಳೆಯಾಗಲಿದೆ ಎಂದು

ಭಾರತೀಯ ಹವಾಮಾನ ಇಲಾಖೆ (Indian Meteorological Department) ವರದಿ ತಿಳಿಸಿದೆ. 

ಮುಂದಿನ 48 ಗಂಟೆಯ ಅವಧಿ: ಕರಾವಳಿಯ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ; ಉತ್ತರ ಒಳನಾಡಿನ ಬೆಳಗಾವಿ, ಬೀದರ್‌,

ಕಲಬುರಗಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀಯಿಂದ

ಅತೀ ಭಾರೀ ಮಳೆಯಾಗುವ ಸಾಧ್ಯತೆ (Karnataka Weather Report) ಇದೆ.

ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ,

ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀಯಿಂದ ಅತೀ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ

ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಹಾಸನ, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ

ಎಂದು ಭಾರತೀಯ ಹವಾಮಾನ (Karnataka Weather Report) ಇಲಾಖೆ ಮುನ್ಸೂಚನೆ ನೀಡಿದೆ.

ಬುಧವಾರ ಹಾಗೂ ಗುರುವಾರ ರಾಜ್ಯದಾದ್ಯಂತ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಮಿಂಚು ಗುಡುಗು ಸಾಧ್ಯತೆ ಇದೆ.

ಬಿರುಗಾಳಿಯ ವೇಗವು ಗಂಟೆಗೆ 40ರಿಂದ 50 ಕಿ.ಮೀ ಇರುವ ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ: ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40ರಿಂದ 45 ಕಿ.ಮೀ ವೇಗದಲ್ಲಿ ಬೀಸುವ ವಾತಾವರಣವಿರುತ್ತದೆ.

ಹೀಗಾಗಿ, ಈ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ಮತ್ತು ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶ: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು,

ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸಲಿದೆ. ಗರಿಷ್ಠ ಉಷ್ಣಾಂಶವು 26 ಮತ್ತು ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ

ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

ಭಾರೀ ಪ್ರಮಾಣದಲ್ಲಿ ಮಳೆ: ಕೊಡಗಿನ ಭಾಗಮಂಡಲದಲ್ಲಿ 19 ಸೆಂ.ಮೀ ಮಳೆಯಾಗಿದೆ. ಕ್ಯಾಸಲ್‌ ರಾಕ್‌ನಲ್ಲಿ 17 ಸೆಂ.ಮೀ ಮಳೆಯಾಗಿದೆ.

ಮೂಲ್ಕಿ, ಸುಬ್ರಹ್ಮಣ್ಯ, ಜಗಲಬೆಟ್‌, ಕೊಟ್ಟಿಗೆಹಾರದಲ್ಲಿ ತಲಾ 16 ಸೆಂ.ಮೀ ಮಳೆಯಾಗಿದೆ.

ಸುಳ್ಯ, ಗೇರುಸೊಪ್ಪದಲ್ಲಿ ತಲಾ 15 ಸೆಂ.ಮೀ  (Rain) ಮಳೆಯಾಗಿದೆ.

Image Credit: Pexels 

Published On: 26 July 2023, 11:00 AM English Summary: Heavy rains are predicted by the Indian Meteorological Department in this part of the state

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.