1. ಸುದ್ದಿಗಳು

ಆಧುನಿಕ ಭಗೀರಥ ಕೆರೆ ಕಾಮೇಗೌಡ ಇನ್ನಿಲ್ಲ..!

KJ Staff
KJ Staff
Modern Bhagirath Lake Kamegowda is no more

ಆಧುನಿಕ ಭಗೀರಥ ಎಂದೇ ಖ್ಯಾತರಾಗಿದ್ದ (Modern Bhagirath) ಮಂಡ್ಯ (Mandya)ದ ಮಳವಳ್ಳಿ ತಾಲ್ಲೂಕಿನ ದಾಸನ      ದೊಡ್ಡಿಯ   ಕಲ್ಮನೆ ಕಾಮೇಗೌಡ (84) (Kamegowda) ಅವರು ಸೋಮವಾರ (ಅಕ್ಟೋಬರ್‌ 17) ಆರೋಗ್ಯ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿರಿ: ಸಿಹಿಸುದ್ದಿ: ಮೀನುಗಾರರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆ, ₹50 ಕೋಟಿ ಅನುದಾನ ಮೀಸಲು!

16ಕ್ಕೂ ಹೆಚ್ಚು ಕೆರೆಗಳನ್ನು ಯಾವುದೇ ಸದ್ದಿಲ್ಲದೆ ಅಭಿವೃದ್ಧಿ ಮಾಡಿ, ಹಳ್ಳಿಯ ಸಹಜ ಜೀವನ ಸಾಗಿಸಿದ್ದ ಕಾಮೇಗೌಡ ಅವರು ಮಳವಳ್ಳಿಯ ಜನರ ಪ್ರೀತಿ ಪಾತ್ರರಾಗಿದ್ದರು. 

ನೀಲಿ ವೆಂಕಟಗೌಡ, ರಾಜಮ್ಮ ದಂಪತಿಯ ಮಗ ಕಾಮೇಗೌಡರು (Modern Bhagirath Lake Kamegowda) ಅವರು ತಮ್ಮ ಪರಿಸರ ಕಾಳಜಿಯಿಂದಲೇ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದರು.

ಅಷ್ಟೇ ಅಲ್ಲದೇ ಮಳವಳ್ಳಿ ತಾಲ್ಲೂಕಿನ ಕುಂದೂರು ಬೆಟ್ಟದಲ್ಲಿ ಅಂತರ್ಜಲ ವೃದ್ಧಿ ಮಾಡುವುದು ಹಾಗೂ ಪ್ರಾಣಿ ಪಕ್ಷಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕಾಮೇಗೌಡ ಅವರು 16 ಕೆರೆಗಳನ್ನು ನಿರ್ಮಾಣ ಮಾಡಿದ್ದರು.

ಸಾವಿರಾರು ಗಿಡಗಳನ್ನು ನೆಟ್ಟು ಬೆಟ್ಟದಲ್ಲಿ ಹಸಿರು ಕ್ರಾಂತಿ ಮಾಡುವ ಮೂಲಕ ಪರಿಸರ ಕಾಳಜಿಯನ್ನು ಕಾಮೇಗೌಡರು ಮೆರೆದಿದ್ದರು.

ಮೀನುಗಾರರಿಗೆ ಭರ್ಜರಿ ಸುದ್ದಿ ನೀಡಿದ ಸಿಎಂ, 3 ಲಕ್ಷ ಸಹಾಯಧನ ಘೋಷಣೆ!

ಇವರ ಪರಿಸರ ಪ್ರೇಮ ಹಾಗೂ ಪರಿಸರ ಕಾಳಜಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಕಾಮೇಗೌಡ ಅವರ ಸಾಧನೆಗೆ ಮೆಚ್ಚುಗೆ ಸೂಚಿಸಿದ್ದರು.

ಕಾಮೇಗೌಡ ಅವರ ಸಾಧನೆಯ ಬಗ್ಗೆ ಮನ್‌ ಕೀ ಬಾತ್‌ನಲ್ಲಿ ಚರ್ಚೆಯಾದ ನಂತರ ರಾಷ್ಟ್ರದಾದ್ಯಂತ ಸುದ್ದಿಯಾಗಿತ್ತು. ಅಲ್ಲದೇ ಕಾಮೇಗೌಡ ಅವರ ಪರಿಸರ ಕಾಳಜಿಗೆ ಅಪಾರ ಮೆಚ್ಚುಗೆಯೂ ವ್ಯಕ್ತವಾಗಿತ್ತು.

ಕ್ಕೆ ಕಾಮೇಗೌಡರನ್ನು ಆಹ್ವಾನ ಮಾಡಲಾಗಿತ್ತು. ಆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಮೇಗೌಡರ ಕಾರ್ಯವನ್ನು ಶ್ಲಾಘನೆ ಮಾಡಿ ಹೊಗಳಿದ್ದರು.

ಕಾಮೇಗೌಡರ ಕೆಲಸವನ್ನು ಗುರುತಿಸಿ ರಾಜ್ಯೋತ್ಸವ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಲಾಗಿದೆ. 2018ರಲ್ಲಿ ರಾಜ್ಯ ಸರ್ಕಾರವು ಇವರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು.

ಡ್ರೋನ್ ಖರೀದಿಸಲು ಯೋಜಿಸುತ್ತಿರುವ ರೈತರಿಗೆ ಸುವರ್ಣಾವಕಾಶ, ಸರ್ಕಾರ 50% ಸಬ್ಸಿಡಿ

ಗ್ರಾಮದ ಕೆಲವರ ವಿರೋಧದಿಂದಾಗಿ ಜಿಲ್ಲಾಡಳಿತವು ಇವರ ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸ್ಸು ಮಾಡಿರಲಿಲ್ಲ. ಇದರಿಂದಾಗಿ ಕಾಮೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಸಿಗುವುದು ಕೈತಪ್ಪಿತ್ತು. ಆದರೆ, ಅವರು ಮಾತ್ರ ಪರಿಸರ ಸೇವೆಯನ್ನು ಮುಂದುವರಿಸಿದರು.

ಕೆರೆ ನಿರ್ಮಾಣಕ್ಕೆ ಪ್ರೇರಣೆ ಏನು 

Modern Bhagirath Lake Kamegowda: ಕುರಿಗಾಹಿಯಾಗಿದ್ದ ಕಾಮೇಗೌಡ ಅವರು 15 ವರ್ಷಗಳ ಹಿಂದೆ ಕುಂದೂರು ಬೆಟ್ಟಕ್ಕೆ ಕುರಿ ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ವಿಪರೀತ ದಾಹವಾಗಿ ನೀರಿಗಾಗಿ ಪರದಾಡಿದ್ದರು.

ನೀರಗಾಗಿ ಸಾಕಷ್ಟು ಪರದಾಡಿ ನಂತರ,  ಸ್ವಲ್ಪ ದೂರದ ಮನೆಗೆ ಹೋಗಿ ನೀರು ಕೇಳಿ ಪಡೆದಿದ್ದರು. ಆಗ ನಾನು ದಾಹ ತೀರಿಸಿಕೊಂಡೆ. ಆದರೆ, ಪ್ರಾಣಿಗಳ ಪರಿಸ್ಥಿತಿ ಎನು ಎನ್ನುವ ಚಿಂತೆ ಅವರಿಗೆ ಕಾಡಿತ್ತು. ಹೀಗಾಗಿ ಗುಡ್ಡದಲ್ಲಿ ಕೆರೆ ನಿರ್ಮಾಣಕ್ಕೆ ಮುಂದಾಗಿದ್ದರು.

ಕಾಮೇಗೌಡರು ಗುಡ್ಡದಲ್ಲಿ ಕೆರೆ ಅಭಿವೃದ್ಧಿಪಡಿಸುವುದಕ್ಕೆ ಹಲವರು ಅಚ್ಚರಿ ವ್ಯಕ್ತಪಡಿಸಿದ್ದರೆ, ಇನ್ನೂ ಕೆಲವರು ಅಪಹಾಸ್ಯ ಮಾಡಿದ್ದರು.

ಕಬ್ಬಿನ ದರ ನಿಗದಿಗೆ ಸಿ.ಎಂ ನೇತೃತ್ವದಲ್ಲಿ ಸಭೆ: ಶಂಕರ ಪಾಟೀಲ ಮುನೇನಕೊಪ್ಪ 

ಆಧುನಿಕ ಭಗೀರಥ ಕೆರೆ ಕಾಮೇಗೌಡ ಅವರು

ಇವನಿಗೆ ಹುಚ್ಚು ಹಿಡಿದಿದೆ, ಅದಕ್ಕೆ ಇಲ್ಲಿ ಕೆರೆ ತೋಡುತ್ತಿದ್ದಾನೆ ಎಂದು ಮಾತನಾಡಿದ್ದರು. ಆದರೆ ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ಕಾಮೇಗೌಡರು, ತಮ್ಮ ಕೆಲಸವನ್ನು ಮುಂದುವರಿಸಿದ್ದರು. 

ಮುಂದೆ ಅಪಹಾಸ್ಯ ಮಾಡಿದವರೇ ಕಾಮೇಗೌಡ ಅವರ ಸಾಧನೆಗೆ ಮೆಚ್ಚುಗೆ ಸೂಚಿಸಿದ್ದರು. ಅವರು ಅಭಿವೃದ್ಧಿಪಡಿಸಿದ ಕೆರೆಗಳಲ್ಲಿ ಕಡು ಬೇಸಿಗೆಯೂ ಸಹ ನೀರು ತುಂಬಿರುತ್ತದೆ.

ದಕ್ಷಿಣ ಕರ್ನಾಟಕದ ಇತರ ಭಾಗಗಳಲ್ಲಿ ನೀರು ಕಡಿಮೆಯಾದರೂ ಇವರು ತೋಡಿದ ಕೆರೆಗಳಲ್ಲಿ ನೀರು ತುಂಬಿರುತ್ತಿತ್ತು.

ತಮ್ಮ ಕುರಿಗಳನ್ನು ಮತ್ತು ಜಾನುವಾರುಗಳನ್ನು ಮೇಯಿಸುವಾಗ ಪರ್ವತ ಪ್ರದೇಶದ ಕಣಿವೆಗಳಲ್ಲಿ ನೀರು ಸಿಗದೇ ಪರಿತಪಿಸುತ್ತಿರುವ ಪ್ರಾಣಿ-ಪಕ್ಷಿಗಳನ್ನು ಕಂಡು ಕೆರೆಗಳನ್ನು ಅಗೆಯುವ ಆಲೋಚನೆ ಹೊಳೆಯಿತು ಎಂದು ಕಾಮೇಗೌಡರು ಹೇಳಿದ್ದರು.

ಕಾಮೇಗೌಡ ಅವರ ಆರೋಗ್ಯದಲ್ಲಿ ಭಾನುವಾರ ರಾತ್ರಿ ಏರುಪೇರಾಗಿತ್ತು. ನಂತರ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಇದಾದ ನಂತರ ವಾಂತಿ ಮಾಡಿಕೊಂಡಿದ್ದಾರೆ. ಬಳಿಕ ಮನೆಯಲ್ಲಿಯೇ  ಕಾಮೇಗೌಡ ಅವರು ಸಾವನ್ನಪ್ಪಪ್ಪಿದ್ದಾರೆ.

Published On: 17 October 2022, 11:40 AM English Summary: Modern Bhagirath Lake Kamegowda is no more

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.