1. ಸುದ್ದಿಗಳು

ʻʻನಿಮ್ಮ ಸಾಧನೆಗೆ ನನ್ನ ಸೆಲ್ಯೂಟ್‌ʼʼ: ಇಸ್ರೋ ವಿಜ್ಞಾನಿಗಳನ್ನು ಶ್ಲಾಘಿಸಿದ ನಮೋ

Maltesh
Maltesh
Narendra Modi addresses ISRO scientists

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರೀಸ್ ನಿಂದ ಆಗಮಿಸಿದ ನಂತರ ಬೆಂಗಳೂರಿನ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ (ISTRAC) ಗೆ ಭೇಟಿ ನೀಡಿದರು. ಚಂದ್ರಯಾನ-3 ರ ಯಶಸ್ಸಿನ ಕುರಿತು ಇಸ್ರೋ ತಂಡವನ್ನು ಉದ್ದೇಶಿಸಿ ಮಾತನಾಡಿದರು.

ಪ್ರಧಾನ ಮಂತ್ರಿಯವರು ಚಂದ್ರಯಾನ-3 ಮಿಷನ್ ನಲ್ಲಿ ಭಾಗಿಯಾಗಿರುವ ಇಸ್ರೋ ವಿಜ್ಞಾನಿಗಳನ್ನು ಭೇಟಿ ಮಾಡಿದರು ಮತ್ತು ಅವರೊಂದಿಗೆ ಸಂವಾದ ನಡೆಸಿದರು, ಅಲ್ಲಿ ಅವರಿಗೆ ಚಂದ್ರಯಾನ-3 ಮಿಷನ್ ನಲ್ಲಿನ ಸಂಶೋಧನೆಗಳು ಮತ್ತು ಪ್ರಗತಿಯ ಬಗ್ಗೆ ವಿವರಿಸಲಾಯಿತು.

ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಬೆಂಗಳೂರಿನ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ವರ್ಕ್ (ISTRAC) ನಲ್ಲಿ ತಾವು ಉಪಸ್ಥಿತರಿರುವ ಬಗ್ಗೆ ಅತೀವ ಸಂತಸ ವ್ಯಕ್ತಪಡಿಸಿದರು.

ದೇಹ ಮತ್ತು ಮನಸ್ಸು ಇಷ್ಟೊಂದು ಸಂತೋಷದಿಂದ ತುಂಬಿರುವ ಸಂದರ್ಭವು ಅತ್ಯಂತ ಅಪರೂಪ ಎಂದು ಅವರು ಹೇಳಿದರು. ಪ್ರತಿಯೊಬ್ಬರ ಜೀವನದಲ್ಲಿ ಹಾತೊರೆಯುವಿಕೆಯ ಸಂದರ್ಭವು ಮೇಲುಗೈ ಸಾಧಿಸುವ ಕೆಲವು ವಿಶೇಷ ಕ್ಷಣಗಳನ್ನು ಉಲ್ಲೇಖಿಸಿದ ಪ್ರಧಾನಿ, ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ ಗೆ ತಮ್ಮ ಪ್ರವಾಸದ ಸಮಯದಲ್ಲಿ ಅದೇ ರೀತಿಯ ಭಾವನೆಗಳನ್ನು ನಾನು ಅನುಭವಿಸಿದೆ ಮತ್ತು ತಮ್ಮ ಮನಸ್ಸು ಎಲ್ಲಾ ಸಮಯದಲ್ಲೂ ಚಂದ್ರಯಾನ 3 ಮಿಷನ್ ಮೇಲೆ ಕೇಂದ್ರೀಕೃತವಾಗಿತ್ತು ಎಂದು ಹೇಳಿದರು.

ತಮ್ಮ ಪೂರ್ವಸಿದ್ಧತೆಯಿಲ್ಲದ ತಮ್ಮ ISTRAC ಭೇಟಿಯಿಂದಾಗಿ  ಇಸ್ರೋದಲ್ಲಿನ ವಿಜ್ಞಾನಿಗಳಿಗೆ ಉಂಟಾದ ಅನಾನುಕೂಲತೆಯನ್ನು ಗಮನಿಸಿದ  ಪ್ರಧಾನಿಯವರು, ವಿಜ್ಞಾನಿಗಳ ಶ್ರದ್ಧೆ, ಸಮರ್ಪಣೆ, ಧೈರ್ಯ, ನಿಷ್ಠೆ ಮತ್ತು ಉತ್ಸಾಹಕ್ಕೆ ವಂದಿಸಲು ಮತ್ತು ಅವರನ್ನು ಭೇಟಿ ಮಾಡಲು ಉತ್ಸುಕನಾಗಿದ್ದೆ ಎಂದು ಹೇಳಿದರು.

ಇದು ಅಷ್ಟೊಂದು ಸರಳವಾದ ಯಶಸ್ಸಲ್ಲ ಎಂದು ಪ್ರಧಾನಿ ಹೇಳಿದರು. ಈ ಸಾಧನೆಯು ಅನಂತ ಬಾಹ್ಯಾಕಾಶದಲ್ಲಿ ಭಾರತದ ವೈಜ್ಞಾನಿಕ ಶಕ್ತಿಯನ್ನು ಸಾರುತ್ತದೆ ಎಂದು ಅವರು ಹೇಳಿದರು. "ಭಾರತವು ಚಂದ್ರನ ಮೇಲಿದೆ, ನಾವು ನಮ್ಮ ರಾಷ್ಟ್ರೀಯ ಹೆಮ್ಮೆಯನ್ನು ಚಂದ್ರನ ಮೇಲೆ ಇರಿಸಿದ್ದೇವೆ" ಎಂದು ಹರ್ಷಚಿತ್ತರಾದ ಪ್ರಧಾನಿ ಉದ್ಗರಿಸಿದರು.

ಈ ಅಭೂತಪೂರ್ವ ಸಾಧನೆಯ ಬಗ್ಗೆ ಮಾತನಾಡಿದ ಪ್ರಧಾನಮಂತ್ರಿಯವರು “ಇದು ಇಂದಿನ ಭಾರತ ನಿರ್ಭೀತ ಮತ್ತು ಪರಿಶ್ರಮದ ಭಾರತವಾಗಿದೆ. ಇದು ಹೊಸ ಮತ್ತು ಹೊಸ ರೀತಿಯಲ್ಲಿ ಯೋಚಿಸುವ ಭಾರತವಾಗಿದೆ, ಕತ್ತಲೆಯ ವಲಯಕ್ಕೆ ಹೋಗಿ ಜಗತ್ತಿಗೆ ಬೆಳಕನ್ನು ಹರಡುತ್ತದೆ. ಈ ಭಾರತವು 21 ನೇ ಶತಮಾನದಲ್ಲಿ ಪ್ರಪಂಚದ ದೊಡ್ಡ ಸಮಸ್ಯೆಗಳಿಗೆ ಪರಿಹಾರಗಳನ್ನು ನೀಡುತ್ತದೆ” ಎಂದರು.

ಚಂದ್ರನ ಮೇಲೆ ಇಳಿದ ಕ್ಷಣವು ರಾಷ್ಟ್ರದ ಪ್ರಜ್ಞೆಯಲ್ಲಿ ಅಮರವಾಗಿದೆ ಎಂದು ಪ್ರಧಾನಿ ಹೇಳಿದರು. “ಚಂದ್ರನ ಮೇಲೆ ಇಳಿದ ಕ್ಷಣವು ಈ ಶತಮಾನದ ಅತ್ಯಂತ ಸ್ಪೂರ್ತಿದಾಯಕ ಕ್ಷಣಗಳಲ್ಲಿ ಒಂದಾಗಿದೆ. ಪ್ರತಿಯೊಬ್ಬ ಭಾರತೀಯನೂ ಇದನ್ನು ತನ್ನ ಸ್ವಂತ ಗೆಲುವನ್ನಾಗಿ ತೆಗೆದುಕೊಂಡಿದ್ದಾನೆ”ಎಂದು ಅವರು ಹೇಳಿದರು. ಈ ಮಹಾನ್ ಯಶಸ್ಸಿನ ಶ್ರೇಯಸ್ಸು ವಿಜ್ಞಾನಿಗಳಿಗೆ ಸಲ್ಲಬೇಕು ಎಂದು ಪ್ರಧಾನ ಮಂತ್ರಿ ಹೇಳಿದರು.

"ಚಂದ್ರಯಾನ-3 ರ ಮೂನ್ ಲ್ಯಾಂಡರ್ ಇಳಿದ ಸ್ಥಳವನ್ನು ಈಗ 'ಶಿವಶಕ್ತಿ' ಎಂದು ಕರೆಯಲಾಗುವುದು" ಎಂದು ಪ್ರಧಾನಿ ಘೋಷಿಸಿದರು. "ಶಿವನಲ್ಲಿ, ಮಾನವೀಯತೆಯ ಕಲ್ಯಾಣದ ಸಂಕಲ್ಪವಿದೆ ಮತ್ತು ಶಕ್ತಿಯು ಆ ಸಂಕಲ್ಪವನ್ನು ಈಡೇರಿಸಲು ನಮಗೆ ಶಕ್ತಿಯನ್ನು ನೀಡುತ್ತದೆ. ಚಂದ್ರನ ಈ ಶಿವಶಕ್ತಿ ಬಿಂದುವು ಹಿಮಾಲಯದಿಂದ ಕನ್ಯಾಕುಮಾರಿಯವರೆಗೆ ಸಂಪರ್ಕದ ಭಾವನೆಯನ್ನು ನೀಡುತ್ತದೆ ಎಂದು ಅವರು ಹೇಳಿದರು.

Published On: 26 August 2023, 05:34 PM English Summary: Narendra Modi addresses ISRO scientists

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.