1. ಸುದ್ದಿಗಳು

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ..ಸರ್ಕಾರ ಸಿಲಿಂಡರ್ ಮೇಲೆ ನೀಡ್ತಿದೆ ಸಬ್ಸಿಡಿ

Maltesh
Maltesh

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಸುಮಾರು 9 ಕೋಟಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಹೌದು ಈ ಯೋಜನೆಯ ಫಲಾನುಭವಿಗಳಿಗೆ ಒಟ್ಟು 12 ಸಿಲಿಂಡರ್‌ಗಳಿಗೆ 200 ರೂಪಾಯಿ ಸಬ್ಸಿಡಿ ನೀಡುವುದಾಗಿ  ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0

ಮೇ 2016 ರಲ್ಲಿ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ (MOPNG), ಗ್ರಾಮೀಣ ಮತ್ತು ವಂಚಿತ ಕುಟುಂಬಗಳಿಗೆ LPG ಯಂತಹ ಶುದ್ಧ ಅಡುಗೆ ಇಂಧನವನ್ನು ಲಭ್ಯವಾಗುವಂತೆ ಮಾಡುವ ಉದ್ದೇಶದೊಂದಿಗೆ 'ಪ್ರಧಾನ ಮಂತ್ರಿ ಉಜ್ವಲ ಯೋಜನೆ' (PMUY) ಅನ್ನು ಪ್ರಮುಖ ಯೋಜನೆಯಾಗಿ ಪರಿಚಯಿಸಿತು. ಸಾಂಪ್ರದಾಯಿಕ ಅಡುಗೆ ಇಂಧನಗಳಾದ ಉರುವಲು, ಕಲ್ಲಿದ್ದಲು, ಹಸುವಿನ ಬೆರಣಿಗಳನ್ನು ಇತ್ಯಾದಿಗಳನ್ನು ಬಳಸುವುದು ಸಾಂಪ್ರದಾಯಿಕ ಅಡುಗೆ ಇಂಧನಗಳ ಬಳಕೆಯು ಗ್ರಾಮೀಣ ಮಹಿಳೆಯರ ಆರೋಗ್ಯದ ಮೇಲೆ ಮತ್ತು ಪರಿಸರದ ಮೇಲೆ ಹಾನಿಕಾರಕ ಪರಿಣಾಮಗಳನ್ನು ಬೀರಿತು.

ಗುಡ್‌ ನ್ಯೂಸ್‌: ಸಾವಯವ ಕೃಷಿಕರಿಗೆ ಇಲ್ಲಿದೆ ಬರೋಬ್ಬರಿ ರೂ.50,000 ಸಬ್ಸಿಡಿ!

LIC ಯಿಂದ ಗುಡ್ನ್ಯೂಸ್: ಈಗ ನಿಮ್ಮ 40ನೇ ವರ್ಷದಿಂದಲೇ ಪಿಂಚಣಿ ಪಡೆಯಬಹುದು! ಏನಿದು ಹೊಸ ಯೋಜನೆ?

ಈ ಯೋಜನೆಯನ್ನು 1ನೇ ಮೇ 2016 ರಂದು ಉತ್ತರ ಪ್ರದೇಶದಲ್ಲಿ ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿಯವರು ಉದ್ಘಾಟಿಸಿದರು.

ಇನ್ನು  ಟ್ವೀಟ್ ಮಾಡಿ ಮಾಹಿತಿ  ನೀಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,  ಈ ಸಾಲಿನಲ್ಲಿPM ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್‌ಗೆ ₹ 200 ಸಬ್ಸಿಡಿ (LPG Price Drop) ನೀಡುತ್ತೇವೆ. ಈ ಕ್ರಮವು  ದೇಶದ ಪ್ರತಿ ಮನೆಯ ತಾಯಂದಿರಿಗೆ, ಸಹೋದರಿಯರಿಗೆ ಸಹಾಯ ಮಾಡುತ್ತದೆ ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಗುಡ್‌ನ್ಯೂಸ್‌: ದೇಶದಲ್ಲಿ ಅಡುಗೆ ಎಣ್ಣೆಯ ದರ ಏರಿಕೆಯಾಗಲ್ಲ ಎಂದ ಕೇಂದ್ರ

ಗುಡ್‌ನ್ಯೂಸ್‌: ದೇಶಾದ್ಯಂತ ಬಲವರ್ಧಿತ ಅಕ್ಕಿ ವಿತರಣೆಗೆ ಸಂಪುಟ ಅಸ್ತು..!

ಈ ಸಬ್ಸಿಡಿಯನ್ನು ವರ್ಷಕ್ಕೆ 12 ಸಿಲಿಂಡರ್‌ಗಳಿಗೆ ಸೀಮಿತಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ. ಕೋವಿಡ್‌ ಸಾಂಕ್ರಾಮಿಕ ಮತ್ತು ಉಕ್ರೇನ್‌ನಲ್ಲಿನ ಬಿಕ್ಕಟ್ಟಿನ ಪರಿಣಾಮವಾಗಿ ಭಾರತದಲ್ಲಿ ಬೆಲೆ ಏರಿಕೆ ಮತ್ತು ಹಣದುಬ್ಬರವನ್ನು ಎದುರಿಸಲು ಇದು ದೊಡ್ಡ ಉಪಕ್ರಮಗಳಲ್ಲಿ ಒಂದಾಗಿದೆ.  ಇದು ಪ್ರಪಂಚದಾದ್ಯಂತ ತೈಲ ಮತ್ತು ಆಹಾರದ ವೆಚ್ಚವನ್ನು ಹೆಚ್ಚುವುದನ್ನು ನಿಯಂತ್ರಸುತ್ತದೆ.

ಸದ್ಯ ನಾವು ಪೆಟ್ರೋಲ್ ಮೇಲಿನ ಕೇಂದ್ರದ ಅಬಕಾರಿ ಸುಂಕವನ್ನು  ಲೀಟರ್‌ಗೆ 8 ರೂಪಾಯಿ ಹಾಗೂ ಡಿಸೇಲ್‌ಗೆ 6 ರಷ್ಟು ಕಡಿಮೆ ಮಾಡಿದ್ದೇವೆ. ಇದರ ಪರಿಣಾಮ  ಕ್ರಮವಾಗಿ ಪೆಟ್ರೋಲ್‌ ಹಾಗೂ ಡಿಸೇಲ್‌ ದರಗಳಲ್ಲಿ 9 ರೂ ಹಾಗೂ 7 ರೂ ಇಳಿಕೆಯಾಗಲಿದೆ  ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಣೆ ಮಾಡಿದ್ದಾರೆ.

ಇಂದಿನ ಘೋಷಣೆಗೂ ಮುನ್ನ ದೆಹಲಿ ಮತ್ತು ಮುಂಬೈನಲ್ಲಿ 14.2 ಕೆಜಿ ಸಿಲಿಂಡರ್ ಬೆಲೆ 1,003 ರೂ., ಕೋಲ್ಕತ್ತಾದಲ್ಲಿ 1,029 ರೂ., ಮತ್ತು ಚೆನ್ನೈನಲ್ಲಿ 1,018.5 ರೂ. ಸಿಲಿಂಡರ್‌ ಬೆಲೆ ಇದೆ. ಸೀತಾರಾಮನ್ ಅವರು ಇಂಧನ ಮತ್ತು ಡೀಸೆಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಕ್ರಮವಾಗಿ ಲೀಟರ್‌ಗೆ 8 ಮತ್ತು 6 ರೂ. ಉಕ್ರೇನ್ ಬಿಕ್ಕಟ್ಟಿನ ನಂತರ ಕಚ್ಚಾ ತೈಲ ಬೆಲೆಗಳು ಏರಿಕೆಯಾದ ನಂತರ, ದೇಶದ ಹಲವಾರು ಪ್ರದೇಶಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ಗೆ 100 ರೂ.

ಕೇಂದ್ರ ಸಚಿವ ಪರ್ಷೋತ್ತಮ್ ರೂಪಾಲಾ ಅವರಿಂದ ವಿದ್ಯಾರ್ಥಿಗಳಿಗೆ “ಗೋ ಕಾಶ್ಟ್” ಯಂತ್ರ ವಿತರಣೆ!

ರಸಗೊಬ್ಬರ, ಬೀಜ ಹಾಗೂ ಕೀಟನಾಶಕಗಳ ಆನ್ಲೈನ್ ಡೀಲರ್ಶಿಪ್ ಪರವಾನಗಿ ಪಡೆಯುವ ವಿಧಾನಗಳು!

ಹೆಚ್ಚುವರಿಯಾಗಿ, ಭಾರತವು ಹೆಚ್ಚು ಆಮದು ಮಾಡಿಕೊಳ್ಳುವ ಪ್ಲಾಸ್ಟಿಕ್, ಕಬ್ಬಿಣ ಮತ್ತು ಉಕ್ಕಿನ ಸರಕುಗಳಿಗೆ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸರ್ಕಾರ ಕಡಿಮೆ ಮಾಡುತ್ತದೆ ಎಂದು ಹಣಕಾಸು ಸಚಿವರು ಭರವಸೆ ನೀಡಿದರು. ಇದು ಅಂತಿಮ ಉತ್ಪನ್ನಗಳ ಬೆಲೆಯನ್ನು ಕಡಿಮೆ ಮಾಡುತ್ತದೆ ಎಂದು ಅವರು ಹೇಳುತ್ತಾರೆ.

Published On: 23 May 2022, 12:26 PM English Summary: Pradhan Mantri Ujjwala Yojana 2.0 LPG Subsidy

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.