1. ಸುದ್ದಿಗಳು

ಜೆಡಿಎಸ್​-ಕಾಂಗ್ರೆಸ್​ ಸೀಟು ಹಂಚಿಕೆ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ; ಸಿದ್ದರಾಮಯ್ಯ

ಹುಬ್ಬಳ್ಳಿ,(ಫೆ.21): ಲೋಕಸಭಾ ಸಮರಕ್ಕೆ ಎಲ್ಲಾ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿವೆ. ಬಿಜೆಪಿ ಮತ್ತು ಕಾಂಗ್ರೆಸ್​ ನಾಯಕರು ಮತದಾರರ ಮನ ಗೆಲ್ಲಲು ಕ್ಷೇತ್ರ ಪ್ರವಾಸದಲ್ಲಿ ನಿರತರಾಗಿದ್ದಾರೆ. ರಾಜಕೀಯ ಸಮಾವೇಶಗಳನ್ನು ಆಯೋಜಿಸಿ ಸಮರಕ್ಕೆ ಸಜ್ಜಾಗುತ್ತಿದ್ದಾರೆ. ಇನ್ನೊಂದೆಡೆ ಜೆಡಿಎಸ್​ ಮತ್ತು ಕಾಂಗ್ರೆಸ್​ ನಾಯಕರ ನಡುವೆ ಸೀಟು ಹಂಚಿಕೆ ವಿಚಾರವಾಗಿ ಒಡಕು ಮೂಡಿದೆ. ಇದೇ ವಿಚಾರವಾಗಿ ಎಚ್​.ಡಿ. ಕುಮಾರಸ್ವಾಮಿ ನಾವು ಭಿಕ್ಷುಕರಲ್ಲ ಎಂದು ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ.

ಕಾಂಗ್ರೆಸ್​-ಜೆಡಿಎಸ್​​ ಸೀಟು ಹಂಚಿಕೆ ವಿಚಾರ ಸಂಬಂಧ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಮಾತನಾಡಿದ್ದಾರೆ. ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದೆ. ಆದರೆ ಜೆಡಿಎಸ್​-ಕಾಂಗ್ರೆಸ್​ ಸೀಟು ಹಂಚಿಕೆ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ. ಮೈತ್ರಿ ಸರ್ಕಾರದಲ್ಲಿ ಯಾರೂ ಕೂಡ ಭಿಕ್ಷುಕರಲ್ಲ. ಸಮನ್ವಯತೆಯಿಂದ ಕೂತು ಸೀಟು ಹಂಚಿಕೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
Published On: 21 February 2019, 01:55 PM English Summary: ಜೆಡಿಎಸ್​-ಕಾಂಗ್ರೆಸ್​ ಸೀಟು ಹಂಚಿಕೆ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ; ಸಿದ್ದರಾಮಯ್ಯ

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.